ಶಿಕ್ಷಣ, ಆರೋಗ್ಯ ಮತ್ತು ನೀರಾವರಿಗೆ ಮೊದಲು ಆದ್ಯತೆ ನೀಡುವುದರ ಮೂಲಕ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಶಿಕ್ಷಣ, ಉದ್ಯೋಗ ಸೃಜನೆಗೆ ಪಣ ಮಾಯಕೊಂಡ ಕ್ಷೇತ್ರದ ಪ್ರಚಾರದಲ್ಲಿ ಗಾಯತ್ರಿ
ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮತ್ತು ತಾಂತ್ರಿಕ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದ್ದು, ಸರ್ಕಾರಿ ಡಿಪ್ಲೋಮಾ ಹಾಗೂ ವೃತ್ತಿಪರ ಕೋರ್ಸ್ಗಳ ಪ್ರಾರಂಭಕ್ಕೆ ಒತ್ತು ನೀಡಲಾಗುವುದು ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ತಿಳಿಸಿದರು.
ಕೊಂಡಜ್ಜಿ ಕೆರೆ ಎಲ್ಲಿದೆ ಎನ್ನುವ ಸಂಸದರು ಬೇಕೇ, ಎಲ್ಲಾ ಕೆರೆಗಳನ್ನು ತುಂಬಿಸುವ ಸಂಸದರು ಬೇಕೆ ?
ಕಳೆದ ಬಾರಿ ಆಯ್ಕೆಯಾದ ಸಂಸದರು ಕೊಂಡಜ್ಜಿ ಕೆರೆ ಎಲ್ಲಿದೆ ಎಂದು ಕೇಳುತ್ತಾರೆ, ಮಳೆ ಬಂದ್ರೆ ಕೆರೆ ತುಂಬುತ್ತೆ ಅಂತಾರೆ ಎಂದರೆ ನೀವೇ ಅರ್ಥಮಾಡಿಕೊಳ್ಳಿ ಅಂತಹ ಸಂಸದರು ಬೇಕೇ ? ಎಂದು ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಜಂಟಿ ಕಾರ್ಯದರ್ಶಿಗಳೂ ಆದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಪ್ರಶ್ನಿಸಿದರು.
ತರಳಬಾಳು ಶ್ರೀಗಳ ಮನವೊಲಿಕೆ ಮತದಾನ ಮಾಡಿದ ಗ್ರಾಮಸ್ಥರು
ಸಿರಿಗೆರೆ : ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರ ಗ್ರಾಮಸ್ಥರು ಲೋಕ ಸಭಾ ಚುನಾವಣೆಗೆ ಬಹಿಷ್ಕಾರ ಹಾಕಿದ್ದರಾದರೂ, ತರಳಬಾಳು ಜಗದ್ಗುರು ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮನವೊಲಿಕೆಯ ನಂತರ ಮತ ಚಲಾವಣೆ ಮಾಡಿದ್ದಾರೆ.
ಜನಾದೇಶಕ್ಕೆ ಮೊದಲ ಹೆಜ್ಜೆ ಇಟ್ಟ ಮತದಾರ
ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮತದಾನದ ಮೊದಲ ಹಂತ ಆರಂಭವಾಗಿದೆ. ಮನೆಯಿಂದಲೇ ಮತದಾನ ಮಾಡಲು ಅವಕಾಶ ಪಡೆದಿರುವವರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ನಗರದ ಬಾಪೂಜಿ ಎಂಬಿಎ ಕಾಲೇಜಿನಲ್ಲಿ ಇಂದು ಪದವಿ ದಿನ
ಎಂಬಿಎ ಕಾರ್ಯಕ್ರಮ ಮತ್ತು ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಹಾಗೂ ಬಾಪೂಜಿ ಅಕಾಡೆಮಿ ಆಫ್ ಮ್ಯಾನೇಜ್ಮೆಂಟ್ ಆಫ್ ರಿಸರ್ಚ್ ವತಿಯಿಂದ ಕಾಲೇಜಿನ 2021-23ರ ಬ್ಯಾಚ್ನ ವಿದ್ಯಾರ್ಥಿಗಳಿಗೆ ಪದವಿ ದಿನವನ್ನು ಇಂದು ಸಂಜೆ 4.30ಕ್ಕೆ ಕಾಲೇಜಿನ ಇನ್ಸ್ಟಿಟ್ಯೂಟ್ ಆಡಿಟೋರಿ ಯಂನಲ್ಲಿ ಹಮ್ಮಿಕೊಳ್ಳಲಾಗಿದೆ.
ನಾಳಿನ ಮೋದಿ ಸಮಾವೇಶಕ್ಕೆ ಅನುಮತಿ ನೀಡಬಾರದು : ಡಿ. ಬಸವರಾಜ್ ಆಗ್ರಹ
ನಗರದಲ್ಲಿ ಏ.28ರಂದು ಹಮ್ಮಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶಕ್ಕೆ ಅನುಮತಿ ನೀಡ ಬಾರದು ಎಂದು ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಡಿ. ಬಸವರಾಜ್ ಒತ್ತಾಯಿಸಿದರು.
ನಾಳೆ ನಮ್ಮ ನಡೆ, ಮತಗಟ್ಟೆ ಕಡೆ ಕಾರ್ಯಕ್ರಮ
ಸಾರ್ವತ್ರಿಕ ಲೋಕಸಭಾ ಚುನಾವಣೆ ಪ್ರಯುಕ್ತ ನಾಡಿದ್ದು ದಿನಾಂಕ 28 ರಂದು ಬೆಳಿಗ್ಗೆ 8 ಗಂಟೆಗೆ ನಮ್ಮ ನಡೆ, ಮತಗಟ್ಟೆ ಕಡೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮವು ಗುಂಡಿ ಸರ್ಕಲ್ನಿಂದ ಪ್ರಾರಂಭವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ಬಂದು ನಂತರ ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ
ಪ್ರಧಾನಿ ಆಗಮನ: ನಾಳಿನ ಸಂತೆ ನಿಷೇಧ
ನಾಡಿದ್ದು ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಹಾಗೂ ಕಾನೂನು ಸುವ್ಯಸ್ಥೆ ಕಾಪಾಡುವ ಹಿತದೃಷ್ಟಿಯಿಂದ ನಗರದಲ್ಲಿ ನಾಡಿದ್ದು ದಿನಾಂಕ 28 ರಂದು ನಡೆಯ ಬೇಕಿದ್ದ ವಾರದ ಸಂತೆಯನ್ನು ನಿಷೇಧಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ ತಿಳಿಸಿದ್ದಾರೆ.
ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಚುಡಾಯಿಸಿದವರ ಮೇಲೆ ಕ್ರಮ
ರಾಣೇಬೆನ್ನೂರು : ಕಾಲೇಜಿನಿಂದ ದೇವರಾಜ ಅರಸ್ ಮೆಟ್ರಿಕ್ ಪೂರ್ವ ಮತ್ತು ನಂತರದ ಹಾಸ್ಟೆಲ್ಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಉಮೇಶ ಅಜ್ಜೋಡಿಮಠ ಮತ್ತು ಕಿರಣ ಡೊಂಬರ ಎನ್ನುವ ಇಬ್ಬರು ಯುವಕರನ್ನು ದೂರು ಬಂದ 24 ಗಂಟೆ ಒಳಗಾಗಿ ಪತ್ತೆ ಹಚ್ಚಿ ಅವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿದೆ
ಕಾಂಗ್ರೆಸ್ ಸೇರಲು ಹಣ ಪಡೆದಿಲ್ಲ : ಸೋಗಿ
ನಾನು ಹಣ ಪಡೆದು ಕಾಂಗ್ರೆಸ್ ಸೇರಿದ್ದೇನೆ ಎಂದು ಆರೋಪಿಸಿರುವ ಸಂಸದ ಜಿ.ಎಂ. ಸಿದ್ದೇಶ್ವರ ಅವರು ನಗರ ದೇವತೆ ಶ್ರೀ ದುರ್ಗಾಂಬಿಕಾದೇವಿ ದೇವಸ್ಥಾನಕ್ಕೆ ಬಂದು ಗಂಟೆ ಭಾರಿಸಿ ಪ್ರಮಾಣ ಮಾಡಲಿ ಎಂದು ಮಹಾನಗರ ಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್ ಸವಾಲು ಹಾಕಿದರು.
ಸಾಕು ಪ್ರಾಣಿಗಳ ರ್ಯಾಂಪ್ ವಾಕ್
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ, ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಬರುವ ಮೇ 1 ರಂದು ಸಂಜೆ 5 ಗಂಟೆಗೆ ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಬಾಸ್ಕೆಟ್ ಬಾಲ್ ಗ್ರೌಂಡ್ನಲ್ಲಿ ಸಾಕು ಪ್ರಾಣಿಗಳ ರ್ಯಾಂಪ್ ವಾಕ್ ಆಯೋಜಿಸಲಾಗಿದೆ.
ಕರುಣಾ ಟ್ರಸ್ಟಿನ ಒಂದು ತಿಂಗಳ ಮಜ್ಜಿಗೆ ವಿತರಣೆಯ ಮುಕ್ತಾಯ ಸಮಾರಂಭ
ಕರುಣಾ ಜೀವ ಕಲ್ಯಾಣ ಟ್ರಸ್ಟ್ನಿಂದ ಕಳೆದ 1 ತಿಂಗಳಿಂದ ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮದ ಮುಕ್ತಾಯ ಸಮಾರಂಭವು ಇಂದು ಬೆಳಿಗ್ಗೆ 11 ಗಂಟೆಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಮುಂಭಾಗದ ಸಿಟಿ ಬಸ್ ನಿಲ್ದಾಣದ ಎದುರು ನಡೆಯಲಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕಸೇವಾ ಆಯೋಗ ನಡೆಸಲಿರುವ ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕರಾಮುವಿ ಕೇಂದ್ರ ಕಚೇರಿಯಲ್ಲಿ ನಡೆಸಲಾಗುವುದು. ಆ
ಮೇ 10 ರಿಂದ ವಿಪ್ರ ವಟು ಶಿಕ್ಷಣ ಶಿಬಿರ
ತಾಲ್ಲೂಕು ಬ್ರಾಹ್ಮಣ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ವಿಪ್ರ ವಟು ಶಿಕ್ಷಣ ಶಿಬಿರವನ್ನು ಮೇ 10 ರಿಂದ ಮೇ 19 ರವರೆಗೆ ಪ್ರತಿದಿನ ಬೆಳಿಗ್ಗೆ 7.30 ರಿಂದ ಸಂಜೆ 5.30 ರವರೆಗೆ ಆಯೋಜಿಸಲಾಗಿದೆ
ಬಿಜೆಪಿ ಅಭ್ಯರ್ಥಿಗೆ ಬೆಂಬಲ ಸೂಚಿಸಿದ ಡಾ. ವೈ.ರಾಮಪ್ಪ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಬೆಂಬಲ ಸೂಚಿ ಸಿರುವುದಾಗಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಡಾ.ವೈ. ರಾಮಪ್ಪ ಹೇಳಿದ್ದಾರೆ.
ನೀತಿ ಸಂಹಿತೆ : 14.32 ಕೋಟಿ ವಿವಿಧ ವಸ್ತುಗಳು ಸೇರಿದಂತೆ ನಗದು ವಶ
ಲೋಕಸಭಾ ಚುನಾವಣೆಯ ನೀತಿ ಸಂಹಿತೆಯು ಮಾರ್ಚ್ 16 ರಿಂದ ಜಾರಿಯಲ್ಲಿದ್ದು, ಏಪ್ರಿಲ್ 24 ರ ವರೆಗೆ ನೀತಿ ಸಂಹಿತೆ ಉಲ್ಲಂಘನೆಯಡಿ ರೂ. 14,32,07,731 ಮೌಲ್ಯದ ವಿವಿಧ ವಸ್ತುಗಳು, ಮದ್ಯ, ಮಾದಕ ವಸ್ತು ಸೇರಿದಂತೆ ನಗದು ವಶಪಡಿಸಿಕೊಳ್ಳಲಾಗಿದೆ
ಜೆಇಇ ಮೇನ್ಸ್ನಲ್ಲಿ ನಗರದ ಮಾಗನೂರು ಬಸಪ್ಪ ಕಾಲೇಜಿಗೆ ರ್ಯಾಂಕ್
ಐ.ಐ.ಟಿ, ಎನ್.ಐ.ಟಿ, ಐ.ಐ.ಐ.ಟಿ, ಇಂಜಿನಿಯರಿಂಗ್ ಪದವಿಯ ಪ್ರವೇಶಕ್ಕೆ 2024 ರಲ್ಲಿ ನಡೆಸಲಾದ ಜೆ.ಇ.ಇ ಮೇನ್ಸ್ ಪರೀಕ್ಷೆಯಲ್ಲಿ ಮಾಗನೂರು ಬಸಪ್ಪ ಪಿಯು ಕಾಲೇಜಿನ ವಿದ್ಯಾರ್ಥಿ ವರುಣ್ ಎಂ.ಎಸ್. ರಾಷ್ಟ್ರಮಟ್ಟದಲ್ಲಿ 144 ನೇ ರ್ಯಾಂಕ್ ಪಡೆದಿರುತ್ತಾನೆ.
ಹನುಮ ಜನ್ಮೋತ್ಸವ: ನಾಳೆ ಶೋಭಾಯಾತ್ರೆ
ಶ್ರೀ ಹನುಮ ಜನ್ಮೋತ್ಸವ ಸಮಿತಿ ವತಿಯಿಂದ ಶ್ರೀ ಹನುಮ ಜನ್ಮೋತ್ಸವ ಪ್ರಯುಕ್ತ 3ನೇ ವರ್ಷದ ಶೋಭಾಯಾತ್ರೆಯನ್ನು ನಾಡಿದ್ದು ದಿನಾಂಕ 27ರ ಶನಿವಾರ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಇಂದು ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪನಯನ, ವಿವಾಹ ಮಹೋತ್ಸವ
ವಿಶ್ವಕರ್ಮ ಸಮಾಜ ಸಂಘ ಹಾಗೂ ಜಿಲ್ಲೆಯ ವಿಶ್ವಕರ್ಮ ಸಮಾಜದ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಸಾಮೂಹಿಕ ಉಪನಯನ ಹಾಗೂ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ವಿ.ಎಂ. ಕೊಟ್ರೇಶಾಚಾರ್ ತಿಳಿಸಿದ್ದಾರೆ.
ಸಿದ್ಧಗಂಗಾ ಕಾಲೇಜಿಗೆ ಜೆಇಇ ಮೇನ್ಸ್ನಲ್ಲಿ ರಾಷ್ಟ್ರಮಟ್ಟದಲ್ಲಿ 64ನೇ ರ್ಯಾಂಕ್
2023-24ನೇ ಸಾಲಿನ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಸಿದ್ದಗಂಗಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಮನು ಎಲ್.ಜೆ.ಅದ್ವಿತೀಯ ಸಾಧನೆ ಮಾಡಿ ಅಖಿಲ ಭಾರತ ಮಟ್ಟದ 64ನೇ ರ್ಯಾಂಕ್ ಪಡೆದಿರುತ್ತಾನೆ.
ನಗರದಲ್ಲಿ ಇಂದು ಮಜ್ಜಿಗೆ ವಿತರಣೆ
ಕರುಣಾ ಜೀವ ಕಲ್ಯಾಣ ಟ್ರಸ್ಟ್ನಿಂದ 1 ತಿಂಗಳು ನಡೆಸು ತ್ತಿರುವ ಮಜ್ಜಿಗೆ ವಿತರಣಾ ಕಾರ್ಯ ಕ್ರಮಕ್ಕೆ ಪ್ರತಿಭಾ ವಿಶ್ವನಾಥ್, ಶೋಭಾ ಹನುಮಂತಪ್ಪ, ಎಸ್.ಆರ್. ಮಲ್ಲಿಕಾರ್ಜುನ್ ಸೋಗಿ ನೆನಪಿನಲ್ಲಿ, ಮೇಧಾ ವೇದ ಮಾಧವ ಕುಲಕರ್ಣಿ ಅವರು ಇಂದಿನ ದಾನಿಗಳಾಗಿದ್ದಾರೆ.
ಜಗಳೂರು : ಇಂದಿನ ಕಾಂಗ್ರೆಸ್ ಬೆಂಬಲಿತ ವೀರಶೈವ ಲಿಂಗಾಯತರ ಸಭೆಗೆ ಎಸ್ಸೆಸ್
ಜಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ವೀರಶೈವ ಲಿಂಗಾಯತರ ಸಭೆಯನ್ನು ಇಂದು ಬೆಳಿಗ್ಗೆ 11 ಗಂಟೆಗೆ ಜಗಳೂರಿನ ತರಳಬಾಳು ಕೇಂದ್ರದಲ್ಲಿ ಏರ್ಪಡಿಸಲಾಗಿದೆ.
ವಿನಯ್ಗೆ ಬೆಂಬಲ : ಮಲ್ಲಿಕಾರ್ಜುನ್
ಲೋಕಸಭಾ ಕ್ಷೇತ್ರದ ಜಿ.ಬಿ. ವಿನಯ್ ಕುಮಾರ್ ಅವರನ್ನು ಬೆಂಬಲಿಸುವುದಾಗಿ ಗುಮ್ಮನೂರು ಕೆ.ಎಂ. ಮಲ್ಲಿಕಾರ್ಜುನಪ್ಪ ಪತ್ರಿಕಾಗೋಷ್ಠಿ ಯಲ್ಲಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಎಂ.ನಾಗಪ್ಪ ಬೇಲಿಮಲ್ಲೂರು, ಸಣ್ಣ ಸಿದ್ದಪ್ಪ ಹೊನ್ನಾಳಿ, ಡಾ.ಕರಿಬಸಯ್ಯ ಮಠದ ಒಡೆಯರ್, ಹನುಮಂತಪ್ಪ ಹದಡಿ ಇದ್ದರು.
ಚಿನ್ನಮ್ಮ ಮಹೇಶ್ವರಯ್ಯ ಪದವಿ ಪೂರ್ವ ಕಾಲೇಜಿಗೆ ಶೇ.99ರ ಫಲಿತಾಂಶ
ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಟಿ.ಎಂ ಚಿನ್ನಮ್ಮ ಮಹೇಶ್ವರಯ್ಯ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿಗೆ ಶೇ.99ರಷ್ಟು ಫಲಿತಾಂಶ ಲಭಿಸಿದೆ.
ವಿನಯ್ ಕುಮಾರ್ಗೆ ಹಿಂದುಳಿದ ಜನ ಜಾಗೃತಿ ವೇದಿಕೆ ಬೆಂಬಲ
ಕಾಂತರಾಜ ಆಯೋಗದ ವರದಿಯನ್ನು ಜಾರಿಗೊಳಿ ಸುವುದಾಗಿ ಭರವಸೆ ನೀಡಿರುವ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಅವರನ್ನು ಬೆಂಬಲಿಸುವುದಾಗಿ ಹಿಂದುಳಿದ ಜನ ಜಾಗೃತಿ ವೇದಿಕೆ ಹೇಳಿದೆ.
ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ರಾಣೇಬೆನ್ನೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85ಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸ ಲಾಗುವುದು
ಜನಜಾಗೃತಿಗಾಗಿ ದಸಂಸ ಆಂದೋಲನ
ಬಿಜೆಪಿಯು ಹಿಂದೂ ರಾಷ್ಟ್ರದ ಹೆಸರಿನಲ್ಲಿ ಮನುವಾದಿ ಧರ್ಮ ಸ್ಥಾಪಿಸಲು ಹೊರಟಿರುವ ಹಿನ್ನೆಲೆಯಲ್ಲಿ ದಲಿತ ಸಂಘರ್ಷ ಸಮಿತಿ-ಕರ್ನಾಟಕದ ವತಿಯಿಂದ ಪ್ರತಿ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಆಂದೋಲನ ಹಮ್ಮಿಕೊಂಡಿರುವುದಾಗಿ ಸಂಘಟನೆಯ ಜಿಲ್ಲಾ ಸಂಚಾಲಕ ಅಜ್ಜಪ್ಪ ಎನ್. ತಿಳಿಸಿದ್ದಾರೆ.
ಸಂಸದರ ದುರ್ವರ್ತನೆಯಿಂದ ಕಾಂಗ್ರೆಸ್ ಸೇರ್ಪಡೆ : ಕಲ್ಲಿಂಗಪ್ಪ
ಕೆಟಿಜೆ ನಗರ 15ನೇ ಕ್ರಾಸ್ ಮನೆಯೊಂದರಲ್ಲಿ ಕಳ್ಳತನವಾಗಿದ್ದ ಪ್ರಕರಣ ಪತ್ತೆ ಹಚ್ಚಿರುವ ಪೊಲೀಸರು ಗೋಪಾಲಪುರದ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಸೈಯ್ಯದ್ ಫಜಲ್ (29) ಎಂಬಾತನನ್ನು ಬಂಧಿಸಿ, ಆತನಿಂದ 5.51 ಲಕ್ಷ ರೂ. ಬೆಲೆಯ 90.4 ಗ್ರಾಂ ಬಂಗಾರದ ಆಭರಣಗಳು ಹಾಗೂ 4 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ.
ಮತದಾನ ಜಾಗೃತಿಗೆ ಫ್ಯಾಷನ್ ಶೋ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಇಲಾ ಖೆಯ ವತಿಯಿಂದ ಲೋಕಸಭಾ ಚುನಾವಣಾ ಮತದಾರರ ಜಾಗೃತಿಗೆ ಗ್ಲಾಸ್ಹೌಸ್ನಲ್ಲಿ ಮಹಿಳೆಯರಿಂದ ಫ್ಯಾಷನ್ ಶೋ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
16ನೇ ವಾರ್ಡ್ನಲ್ಲಿ ಬಿಜೆಪಿ ಗೆಲುವಿಗೆ ಸಭೆ
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ನಗರ ಪಾಲಿಕೆಯ 16ನೇ ವಾರ್ಡ್ನಲ್ಲಿ ಬೂತ್ ಪ್ರಮುಖರ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರವಾಗಿ ಮನೆ - ಮನೆಗೆ ತೆರಳಿ ನರೇಂದ್ರ ಮೋದಿ ಜೀ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಸಾಧನೆಗಳ ಕರಪತ್ರ ನೀಡಿ ಮತಯಾಚನೆ ಮಾಡಲಾಯಿತು.
ಸೋತರು, ಗೆದ್ದರು ನಿಮ್ಮ ಜೊತೆ ಇರುತ್ತೇನೆ
ಹೊನ್ನಾಳಿ : ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಅವರ ಅಭಿಮಾನಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಶುಕ್ರವಾರ ಬೃಹತ್ ಬೈಕ್ ರ್ಯಾಲಿ ನಡೆಸಿದರು.
ಭಾನುವಳ್ಳಿಯಲ್ಲಿ ವಾಲ್ಮೀಕಿ ನಾಯಕ ಸಮಾಜದಿಂದ ಚುನಾವಣೆ ಬಹಿಷ್ಕಾರದ ಪತ್ರ
ಮಲೇಬೆನ್ನೂರು : ಭಾನುವಳ್ಳಿ ಗ್ರಾಮದಲ್ಲಿ ಕಳೆದ 25 ವರ್ಷಗಳಿಂದ ಇದ್ದ ರಾಜವೀರ ಮದಕರಿ ನಾಯಕ ವೃತ್ತವನ್ನು ಜಿಲ್ಲಾಡಳಿತ ಏಕಾಏಕಿ ತೆರವು ಮಾಡಿರುವ ಕ್ರಮವನ್ನು ಖಂಡಿಸಿ, ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಗ್ರಾಮದ ವಾಲ್ಮೀಕಿ ನಾಯಕ ಸಮಾಜ ತಿಳಿಸಿದೆ.
ಹರಪನಹಳ್ಳಿ : ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನಕ್ಕೆ ಚಾಲನೆ
ಹರಪನಹಳ್ಳಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದ ನಿರ್ದೇಶನದಂತೆ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಗುರುವಾರ ಮತದಾನಕ್ಕೆ ಚಾಲನೆ ನೀಡಲಾಯಿತು.
ರಾಮೋತ್ಸವದಲ್ಲಿ ಪ್ರಸಾದ ವಿತರಣೆ
ನಗರದ ಚಾಮರಾಜಪೇಟೆಯ ಕಾಸಲ್ರವರ ಶ್ರೀ ಕೋದಂಡರಾಮ ದೇವಸ್ಥಾನದ ಬಳಿ ಈಚೆಗೆ ರಾಮೋತ್ಸವದ ಅಂಗವಾಗಿ ದೇವಸ್ಥಾನ ಸಮಿತಿಯ ಕಾಸಲ್ ನಾಗರಾಜ್, ಕಾಸಲ್ ಅಮರನಾಥ್, ಮಂಜುನಾಥ್ ಅವರು ಸಾರ್ವಜನಿಕರಿಗೆ ಪ್ರಸಾದ ವಿತರಿಸಿದರು.
ಡಾ. ಪ್ರಭಾ ಮಲ್ಲಿಕಾರ್ಜುನ್ ಪರ ಹರಿಹರ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ
ಮಲೇಬೆನ್ನೂರು : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಮುಖಂಡರಾದ ನಂದಿಗಾವಿ ಶ್ರೀನಿವಾಸ್, ಹೆಚ್.ಎಸ್.ನಾಗರಾಜ್, ಬಿ.ಎಂ.ವಾಗೀಶ್ ಸ್ವಾಮಿ ಅವರು ಶುಕ್ರವಾರ ಕೊಂಡಜ್ಜಿ ಜಿ.ಪಂ. ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು.
ಹರಪನಹಳ್ಳಿ ತಾಲ್ಲೂಕಿನಲ್ಲಿ ಮತದಾನ ಜಾಗೃತಿ ಜಾಥಾ
ಹರಪನಹಳ್ಳಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ತಾಲ್ಲೂ ಕಿನ ಮೈದೂರು ಗ್ರಾಮದಲ್ಲಿ ಗುರುವಾರ ಗ್ರಾಮ ಪಂಚಾಯ್ತಿ ವತಿಯಿಂದ ಎತ್ತಿನ ಬಂಡಿಗಳ ಮೆರವಣಿಗೆ ಮೂಲಕ ಮತದಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಚುನಾವಣಾ ರಜೆ ಮತದಾನಕ್ಕೆ ಬಳಸಿ : ರಾಜೇಶ್ವರಿ ಎನ್. ಹೆಗಡೆ
ದಾವಣಗೆರೆ, ಏ.25- ಮತದಾನಕ್ಕೆ ಮೀಸಲಾದ ರಜೆ ಮೋಜು ಮಸ್ತಿಗೆ ಬಳಸಿಕೊಳ್ಳದೇ ಕಡ್ಡಾಯವಾಗಿ ಮತ ಚಲಾಯಿಸಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.
275 ರಷ್ಟು ಅಭ್ಯರ್ಥಿಗಳೇ ಇಲ್ಲದ ಕಾಂಗ್ರೆಸ್ ಕೇಂದ್ರದಲ್ಲಿ ಆಡಳಿತ ನಡೆಸುವುದು ಹೇಗೆ ?
ರಾಣೇಬೆನ್ನೂರು : ಕೇಂದ್ರದಲ್ಲಿ ಸರ್ಕಾರ ರಚಿಸಲು ಸರಳ ಬಹುಮತಕ್ಕೆ 275 ರಷ್ಟು ಲೋಕಸಭಾ ಸದಸ್ಯರ ಅವಶ್ಯಕತೆ ಇದೆ. ಆದರೆ ಕಾಂಗ್ರೆಸ್ ಸ್ಪರ್ಧೆ ಮಾಡಿರುವುದು ಕೇವಲ 250 ಕ್ಷೇತ್ರಗಳಲ್ಲಿ ಮಾತ್ರ ಹೀಗಿದ್ದು ಅದ್ಹೇಗೆ ರಾಹುಲ್ಗಾಂಧಿ ಪ್ರಧಾನಿ ಆಗ್ತಾರೆ ?
ಡಾ. ಪ್ರಭಾ ದಾವಣಗೆರೆಯ ಘನತೆ ಹೆಚ್ಚಿಸುವರು
ದಾವಣಗೆರೆ ಇನ್ನಷ್ಟು ಅಭಿವೃದ್ಧಿಯಾಗಬೇಕೆಂದರೆ ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸುವಂತೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದರು.
ನವಭಾರತ ಸೇನಾದ ಶ್ರೀಕಾಂತ್ ಪ್ರಚಾರ
ನವಭಾರತ ಸೇನಾ ಪಕ್ಷದ ಅಭ್ಯರ್ಥಿ ಎಂ.ಜಿ. ಶ್ರೀಕಾಂತ್ ಜಗಳೂರು ವಿಧಾನಸಭಾ ಕ್ಷೇತ್ರದ ಬಿಳಿಚೋಡು ಗ್ರಾಮದಲ್ಲಿ ಮತಯಾಚನೆ ಮಾಡಿದರು.
ಬೆಣ್ಣೆ ನಗರಿಯಲ್ಲಿ ಅಕ್ಷರ ದೋಸೋತ್ಸವ
ದಾವಣಗೆರೆ ಬೆಣ್ಣೆ ನಗರಿ, ಬೆಣ್ಣೆ ದೋಸೆ ಎಂದೇ ಬ್ರಾಂಡ್ ಪಡೆದುಕೊಂಡಿದೆ. ದೋಸೆ ಕಾವಲಿಯಲ್ಲಿ ದೋಸೆಯ ಹಿಟ್ಟನ್ನು ಬಳಸಿ ನಮ್ಮ ಮತ, ನನ್ನ ಹಕ್ಕು, ತಪ್ಪದೇ ಮೇ 7 ರಂದು ಮತದಾನ ಮಾಡಿ ಎಂಬ ಘೋಷಣೆಯನ್ನು ಕಾವಲಿಯಲ್ಲಿ ದೋಸೆಯಲ್ಲಿ ಮೂಡಿ ಬಂದಿತು.
ಕಾರ್ಯಕರ್ತರಲ್ಲಿ ಒಗ್ಗಟ್ಟಿದ್ದರೆ ಪಕ್ಷಕ್ಕೆ ಸೋಲೇ ಇಲ್ಲ : ಎಸ್ಸೆಸ್ಸೆಂ
ಹರಪನಹಳ್ಳಿ : ಹರಪನಹಳ್ಳಿ ಕ್ಷೇತ್ರವು ಕಾಂಗ್ರೆಸ್ನ ಭದ್ರಕೋಟೆಯಾಗಿದ್ದು, ಇಲ್ಲಿನ ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷಕ್ಕಾಗಿ ದುಡಿದರೆ ಕಾಂಗ್ರೆಸ್ಸಿಗೆ ಸೋಲೇ ಇಲ್ಲ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.
ಹೆಚ್.ಎಸ್. ನಾಗರಾಜ್ ಮತ್ತವರ ಅಭಿಮಾನಿಗಳಿಗೆ ಕಾಂಗ್ರೆಸ್ ಸ್ವಾಗತ
ನಗರದ ರೇಣುಕ ಮಂದಿರದಲ್ಲಿ ನಡೆದ ಹೆಚ್.ಎಸ್. ನಾಗರಾಜ್ ಮತ್ತು ಅಭಿಮಾನಿಗಳ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರೊಂದಿಗೆ ಕಾಂಗ್ರೆಸ್ನ ಹಿರಿಯ ಮುಖಂಡರುಗಳಾದ ಎನ್.ಜಿ. ಪುಟ್ಟಸ್ವಾಮಿ, ಬಿ.ಹೆಚ್. ವೀರಭದ್ರಪ್ಪ, ದುಮ್ಮಿ ಚಮನ್ ಸಾಬ್, ಗಣೇಶ್ ಹುಲ್ಮನಿ ಇತರರಿದ್ದರು.
ವೃದ್ಧರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ
ಮಲೇಬೆನ್ನೂರು : ರಾಜ್ಯದಲ್ಲಿ ಮೇ 7 ರಂದು ಜರುಗಲಿರುವ 2ನೇ ಹಂತದ ಲೋಕಸಭಾ ಚುನಾವಣೆಗೆ ಪಟ್ಟಣದಲ್ಲಿರುವ 85 ವರ್ಷ ಮೇಲ್ಪಟ್ಟ ವೃದ್ದರು ಮತ್ತು ವಿಕಲಚೇತನರು ಗುರುವಾರ ಮನೆಯಿಂದಲೇ ಮತದಾನ ಮಾಡಿದರು.
22ನೇ ವಾರ್ಡ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಪರ ಮತಯಾಚನೆ
ಲೋಕಸಭೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗಾಗಿ ಮಹಾನಗರ ಪಾಲಿಕೆಯ 22ನೇ ವಾರ್ಡ್ ಯಲ್ಲಮ್ಮ ನಗರದ 11ನೇ ಕ್ರಾಸ್ನಲ್ಲಿ ವಾರ್ಡ್ನ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಡಾ. ಪ್ರಭಾ ಮಲ್ಲಿಕಾರ್ಜುನ್ ಗೆಲುವಿಗಾಗಿ ಮನೆ - ಮನೆಗಳಿಗೆ ತೆರಳಿ ಪ್ರಚಾರ ನಡೆಸಿದರು.
ಚಿತ್ರದುರ್ಗದ ಕಾಂಗ್ರೆಸ್ ಸಭೆಯಲ್ಲಿ ಪ್ರಿಯಾಂಕ ಗಾಂಧಿ
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ - ನ್ಯಾಯ ಸಂಕಲ್ಪ ರಾಲಿ ನಿನ್ನೆ ಇಲ್ಲಿ ನಡೆಯಿತು. ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೀಮತಿ ಪ್ರಿಯಾಂಕ ಗಾಂಧಿ ಅವರು ದೀಪ ಬೆಳಗಿಸುವುದರ ಮೂಲಕ ರಾಲಿಯನ್ನು ಉದ್ಘಾಟಿಸಿದರು.
ಹೊನ್ನಾಳಿ : ಮಳೆಗೆ ಧರೆಗುರುಳಿದ ಮರಗಳು
ಹೊನ್ನಾಳಿ : ಈಚೆಗೆ ಸುರಿದ ಮಳೆ, ಬಿರುಗಾಳಿಯ ಪರಿಣಾಮ ಹೊನ್ನಾಳಿ ತಾಲ್ಲೂಕಿನ ಸೊರಟೂರು, ತುಗ್ಗಲಹಳ್ಳಿ, ಕೆಂಚಿಕೊಪ್ಪ ಮಾರ್ಗದಲ್ಲಿ ಧರೆಗುರುಳಿದ ಮರಗಳನ್ನು ಸೊರಟೂರು ಗ್ರಾ.ಪಂ. ಅಧ್ಯಕ್ಷ ಬಸವನಗೌಡ ಪಾಟೀಲ್ ಬೆಸ್ಕಾಂ ಸಿಬ್ಬಂದಿಯೊಂದಿಗೆ ತೆರವುಗೊಳಿಸಿದರು.
ಭಾನುವಳ್ಳಿಯಲ್ಲಿ ಸಂಭ್ರಮದ ತೇರು
ಮಲೇಬೆನ್ನೂರು : ಭಾನುವಳ್ಳಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ರಥೋ ತ್ಸವವು ಬುಧವಾರ ಬೆಳಗ್ಗೆ ಗ್ರಾಮಸ್ಥರ ಸಮ್ಮುಖದಲ್ಲಿ ಸಂಭ್ರ ಮದಿಂದ ಜರುಗಿತು
ಡಾ. ಪ್ರಭಾ ಮಲ್ಲಿಕಾರ್ಜುನ ಅವರಿಗೆ ಕುಂಬಾರ ಸಮಾಜದ ಸ್ವಾಮಿಗಳ ಆಶೀರ್ವಾದ
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಚಿತ್ರದುರ್ಗದ ಕುಂಬಾರ ಸಮಾಜದ ಶ್ರೀ ಬಸವಮೂರ್ತಿ ಗುಂಡಯ್ಯ ಸ್ವಾಮಿಗಳವರನ್ನು ನಿನ್ನೆ ಭೇಟಿಯಾಗಿ ಆಶೀರ್ವಾದ ಪಡೆದರು.
ನಿರಂತರ ದಬ್ಬಾಳಿಕೆ ಪರಿಣಾಮವೇ ಭೂಮಿ `ತಾಪ’ ಹೆಚ್ಚಲು ಕಾರಣ
ನಮ್ಮ ಅತಿಯಾದ ಆಸೆಗಳಿಂದ ಭೂಮಿಯ ಮೇಲೆ ನಿರಂತರ ದಬ್ಬಾಳಿಕೆ ಮಾಡಿದ್ದರ ಪರಿಣಾಮವಾಗಿ ಭೂಮಿಯ ತಾಪ ಹೆಚ್ಚಾಗಿ, ಸರಿಯಾದ ಸಮಯಕ್ಕೆ ಮಳೆ ಬೆಳೆಗಳಾಗದೇ, ರೈತ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ರೈತರ ಮಕ್ಕಳು ಕೃಷಿಯಿಂದ ವಿಮುಖರಾಗುತ್ತಿದ್ದಾರೆಂದು ಸಾವಯವ ಕೃಷಿಕ ನೇರ್ಲಿಗಿ ಪ್ರಕಾಶ್ ತಿಳಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ ಸಂಸತ್ಗೆ ಕಳುಹಿಸಲು ಎಸ್ಸೆಸ್ಸೆಂ ಮನವಿ
ದಾವಣಗೆರೆ : ವಿದ್ಯಾವಂತೆ, ಸರಳ ಸಜ್ಜನಿಕೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಅವರನ್ನು ಗೆಲ್ಲಿಸಿ ಲೋಕಸಭೆ ಕಳುಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಮನವಿ ಮಾಡಿದರು.
ಅಂಬೇಡ್ಕರ್ ಜೀವನ ಸಾಧನೆ ನಮಗೆಲ್ಲಾ ಪ್ರೇರಣೆ
ಸಾಮಾಜಿಕ ಸಮಾನತೆಗಾಗಿ ಜೀವನವನ್ನೇ ಮುಡಿಪಿಟ್ಟು, ನಮಗೆಲ್ಲಾ ವಾಕ್ ಸ್ವಾತಂತ್ರ್ಯ, ಸಮಾನವಾಗಿ ಬದುಕುವ ಸ್ವಾತಂತ್ರ್ಯ ನೀಡಲು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ-ಸಾಧನೆ ನಮಗೆಲ್ಲಾ ಪ್ರೇರಣೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ತಿಳಿಸಿದರು.
ಗ್ರಾಮೀಣ ಮಕ್ಕಳಿಗೆ ಶಿಕ್ಷಣ, ಉದ್ಯೋಗ ಸಿಗಬೇಕಾದರೆ ನನ್ನನ್ನು ಗೆಲ್ಲಿಸಿ
ಜಗಳೂರು : ಗ್ರಾಮೀಣ ಭಾಗದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗಬೇಕಾದರೆ ನನ್ನನ್ನು ಗೆಲ್ಲಿಸಿ, ನಾನು ಶ್ರಮ ವಹಿಸುತ್ತೇನೆ. ಹೊಸ ವ್ಯವಸ್ಥೆ ಸೃಷ್ಟಿಸಲು ರಾಜಕೀಯದಲ್ಲಿ ಅಧಿಕಾರ ಬೇಕು. ಈ ಬಾರಿ ನನ್ನನ್ನು ಗೆಲ್ಲಿಸಿ, ಜಿಲ್ಲೆಯ ಅಭಿವೃದ್ಧಿಯ ದಿಕ್ಕೇ ಬದಲಾಗುತ್ತದೆ
ನಗರದಲ್ಲಿ ರಂಗೋಲಿ ಚಿತ್ತಾರ, ಮತದಾರರ ಜಾಗೃತಿಗೆ ಘೋಷವಾಕ್ಯಗಳ ಅನಾವರಣ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ ಇವರುಗಳ ಸಹಾ ಯದೊಂದಿಗೆ ಸೋಮವಾರ ನಗರದ ಗುರುಭ ವನದ ರಸ್ತೆಯಲ್ಲಿ ರಂಗೋಲಿ ಬಿಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಅಭಿವೃದ್ಧಿ ಬದ್ಧತೆ ನಮಗೆ ಇದೆ : ಶಾಸಕ ಎಸ್ಸೆಸ್
ಅಭಿವೃದ್ಧಿ ಬಗ್ಗೆ ನಮಗೆ ಬದ್ದತೆ ಇದೆ. ನಾವು ಯಾವುದೇ ಸರ್ಕಾರ ಇದ್ದರೂ ಸಹ ದಾವಣಗೆರೆ ಅಭಿವೃದ್ಧಿಗೆ ಬದ್ದರಿದ್ದೇವೆ. ನೀವೂ ಸಹ ನಮ್ಮನ್ನು ಬೆಂಬಲಿಸುವ ಮೂಲಕ ದಾವಣಗೆರೆ ಅಭಿವೃದ್ಧಿಗೆ ಸಹಕರಿಸಬೇಕೆಂದು ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿದರು.