ಹರಿಹರ: ಏ.4ರಂದು ಶ್ರೀ ಕಾಶಿ ನೀಲಕಂಠೇಶ್ವರ ಸ್ವಾಮಿ ಮೂರ್ತಿ ಪ್ರಾಣ ಪ್ರತಿಷ್ಟಾಪನೆ
ಹರಿಹರ : ನಗರದ ಮೆಟ್ಟಿಲು ಹೊಳೆ ರಸ್ತೆಯ ಕುರುಹಿನಶೆಟ್ಟಿ ಸಮಾಜದ ದೇವಸ್ಥಾನ ಆವರಣದಲ್ಲಿ ಶ್ರೀ ಕಾಶಿ ನೀಲಕಂಠೇಶ್ವರ ಸ್ವಾಮಿ ಹಾಗೂ ಗಣಪತಿ ನಂದಿ ದೇವರುಗಳ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಸಮಾರಂಭವು ಏಪ್ರಿಲ್ 4 ರಂದು, ಶ್ರೀ ಜಗದ್ಗುರು ನಾಲ್ವಡಿ ನೀಲಕಂಠ ಪಟ್ಟದಾರ್ಯ ಸ್ವಾಮಿಗಳ ನೇತೃತ್ವದಲ್ಲಿ ನಡೆಯಲಿದೆ